Thursday 20 December 2018

ಹುಚ್ಚು ಖೋಡಿ ಮನಸು -೧೩

ಮುಗಿಲ ಎದೆಯಲ್ಲಿ ತಲೆಯನಿಟ್ಟು
ಭೋರೆಂದು ಅಳಬೇಕೆನಿಸಿತ್ತು..
ಕರಿಮೋಡವೊಂದು ನನಗೆ ಮರುಗಿ
ಕಂಬನಿಯ ತುಂತುರು ಹನಿಸಿತ್ತು..

ನನ್ನ ಗೋರಿ ನಾನೇ ಬಗೆದು
ಅಲ್ಲೇ ತಣ್ಣಗೆ ಮಲಗಬೇಕೆನಿಸಿತ್ತು..
ನೀನಿಲ್ಲದ ಜೀವ-ಜೀವನ ಸಾಕೆನಿಸಿತ್ತು.
ಸತ್ತ ಕನಸುಗಳ ಹೆಣ..ಕೊಳೆತು ನಾರುತ್ತಿತ್ತು

ಇಷ್ಟು ದಿನಗಳ ಕಾಲ ನೀನಿಲ್ಲದ ಬದುಕು
ಸವೆಸಿದ್ದಕ್ಕೆ , ನನ್ನ ಮೇಲೆಯೇ ಜಿಗುಪ್ಸೆ!

 ಹೋಗಲಿ ಬಿಡು ಬಂಗಾರ...
ನೀ ಬಿಟ್ಟುಹೋದ ನೆನಪುಗಳನ್ನೇ
ನೆಟ್ಟು ನೀರೆರೆದು,ಬೆಳೆಸಿ, ಅದರ ಬುಡದಲ್ಲೇ
ಕೊನೆಯ ಕನಸ ಹೂ ಅರಳಿಸುತ್ತೇನೆ.
ಈ ಜಲುಮಕ್ಕೆ ಅಷ್ಟು ಸಾಕು ಬಿಡು!

ಕನವರಿಸಿತ್ತು ನೋಡು ಅರ್ಧಜೀವದ ಕನಸು
ಏನಂದೀತು ಕೇಳು ನಿನ್ನ ಹುಚ್ಚು ಖೋಡಿ ಮನಸು!



1 comment:

  1. ವಾವ್ಹ್ ಅತ್ಯುತಮ ಕವಿತೆ

    ReplyDelete

ಜನ-ಜಾಣತನ

 "ಅಣ್ಣಾ ಜಗಳೂರು ಬಸ್ ಹೋಯ್ತಾ?"-ಯಾರೋ ಕೇಳತಾರೆ. ಕೇಳಿಸಿಕೊಂಡ ಅಂಗಡಿಯವ, ಗೊತ್ತಿದ್ದರೂ ಹೇಳಲ್ಲ.ನಾನ್ಯಾಕೆ ಪುಕ್ಸಟ್ಟೆ ಹೇಳಲಿ ಎಂಬ ಸಣ್ಣತನ. ಅವನ‌ ಅಂಗಡಿಯಲ...