ಬದುಕ ಎಲೆಯ ಮೇಲೆ,
ನಗುವಿನ ಇಬ್ಬನಿಯುದುರುವುದು
ಮುಂಜಾನೆ ಒಂದೆರಡು ಕ್ಷಣವಷ್ಟೇ!!
ಈ ಮಳೆಗಾಲದಲ್ಲೂ ಬಿರುಬಿಸಿಲು,
ಹಗಲಿಡೀ ನೋವಿನ ಬಾಷ್ಪವಿಸರ್ಜನೆ!
ನೋವೆಂಬ ನೋವಿನ ಸಾನಿಧ್ಯದಲ್ಲಿಯೇ
ದ್ಯುತಿ ಸಂಶ್ಲೇಷಣೆಯಾಗಿ ಉಸಿರಾಡಲು
ಏನೋ ಒಂದಷ್ಟು ಶಕ್ತಿ ಸಂಚಯವಾದೀತು!
ರಾತ್ರಿಗಳೋ..ಭೂಮಿಗಿಳಿದ ಬೇರುಗಳೊಂದಿಗೆ!
ಗತದ ಕಸವ ಬೇರಿಗುಣಿಸುತ್ತಾ..
ಅರ್ಧ ಸತ್ತ ಕನಸುಗಳನೆಣಿಸುತ್ತಾ..
ಬೆಳೆವುದ ನಿಲ್ಲಿಸಿದ,ಬದುಕಿನ ಕಾಂಡಕ್ಕೆ
ಕಂಬನಿಯ ನೀರು,ನಿಟ್ಟುಸಿರ ಗಾಳಿ ಹಾಕಿ,
ಬದುಕಿಗಾಗಿ ಚಿಗುರುವ,ಸಾಯಲಿಕ್ಕಾಗಿ ಬೆಳೆಯುವ
ಬಗೆಯನ್ನು ನೋಡುತ್ತ ಕೂರುವುದಿದೆಯಲ್ಲಾ..
ಬಹುಶಃ..ಅದೇ ಬದುಕಿನ ಮೋಕ್ಷವಾ? ಗೊತ್ತಿಲ್ಲ!
Monday, 25 October 2021
ಮೋಕ್ಷ
Subscribe to:
Post Comments (Atom)
"ಹಿ.ಮ.ನಾ. ರವರ ಬಗ್ಗೆ.
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...

-
ಕವಿ, ಪತ್ರಕರ್ತ, ಸಮಾಜಸೇವಕ, ಸ್ವಾತಂತ್ರ್ಯ ಹೋರಾಟಗಾರ ಹಿ.ಮ. ನಾಗಯ್ಯನವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಹೊಸಹಳ್ಳಿ ಹೋಬಳಿಗೆ ಸೇರಿದ ಹಿರೇಕುಂಬ...
-
ಕೆಲವೊಂದು ಸಿನಿಮಾಗಳು, ಇಡೀ ಮನಸ್ಸನ್ನು ಆವರಿಸಿಬಿಡುತ್ತವೆ. ಬಹುಕಾಲ ಕಾಡುತ್ತಲೇ ಇರುತ್ತವೆ. ತಲ್ಲಣಗಳನ್ನು ಎಬ್ಬಿಸಿ,ಆಳವನ್ನು ತಾಕುತ್ರವೆ. ನಾನು ತುಂಬಾ ಹಚ್ಚಿಕೊಂಡ...
-
ಕವಿತೆಯೇ... ನೀನೀಗ ನನಗೆ ಮಜಾ ಅಲ್ಲ. ನೀನೇನು ನನಗೆ ಖಯಾಲಲ್ಲ. ನಿನ್ನನ್ನೇನು ನೂರು ಜನ ಓದಬೇಕಿಲ್ಲ. ಓದಿದವರೆಲ್ಲ ನನಗೆ ಹೇಳುವ ಭೋಪರಾಕುಗಳಿಂದ ಆಗಬೇಕಾದ್ದೇನಿಲ್ಲ. ನ...
No comments:
Post a Comment