ಬದುಕ ಎಲೆಯ ಮೇಲೆ,
ನಗುವಿನ ಇಬ್ಬನಿಯುದುರುವುದು
ಮುಂಜಾನೆ ಒಂದೆರಡು ಕ್ಷಣವಷ್ಟೇ!!
ಈ ಮಳೆಗಾಲದಲ್ಲೂ ಬಿರುಬಿಸಿಲು,
ಹಗಲಿಡೀ ನೋವಿನ ಬಾಷ್ಪವಿಸರ್ಜನೆ!
ನೋವೆಂಬ ನೋವಿನ ಸಾನಿಧ್ಯದಲ್ಲಿಯೇ
ದ್ಯುತಿ ಸಂಶ್ಲೇಷಣೆಯಾಗಿ ಉಸಿರಾಡಲು
ಏನೋ ಒಂದಷ್ಟು ಶಕ್ತಿ ಸಂಚಯವಾದೀತು!
ರಾತ್ರಿಗಳೋ..ಭೂಮಿಗಿಳಿದ ಬೇರುಗಳೊಂದಿಗೆ!
ಗತದ ಕಸವ ಬೇರಿಗುಣಿಸುತ್ತಾ..
ಅರ್ಧ ಸತ್ತ ಕನಸುಗಳನೆಣಿಸುತ್ತಾ..
ಬೆಳೆವುದ ನಿಲ್ಲಿಸಿದ,ಬದುಕಿನ ಕಾಂಡಕ್ಕೆ
ಕಂಬನಿಯ ನೀರು,ನಿಟ್ಟುಸಿರ ಗಾಳಿ ಹಾಕಿ,
ಬದುಕಿಗಾಗಿ ಚಿಗುರುವ,ಸಾಯಲಿಕ್ಕಾಗಿ ಬೆಳೆಯುವ
ಬಗೆಯನ್ನು ನೋಡುತ್ತ ಕೂರುವುದಿದೆಯಲ್ಲಾ..
ಬಹುಶಃ..ಅದೇ ಬದುಕಿನ ಮೋಕ್ಷವಾ? ಗೊತ್ತಿಲ್ಲ!
Monday 25 October 2021
ಮೋಕ್ಷ
Subscribe to:
Post Comments (Atom)
ಜನ-ಜಾಣತನ
"ಅಣ್ಣಾ ಜಗಳೂರು ಬಸ್ ಹೋಯ್ತಾ?"-ಯಾರೋ ಕೇಳತಾರೆ. ಕೇಳಿಸಿಕೊಂಡ ಅಂಗಡಿಯವ, ಗೊತ್ತಿದ್ದರೂ ಹೇಳಲ್ಲ.ನಾನ್ಯಾಕೆ ಪುಕ್ಸಟ್ಟೆ ಹೇಳಲಿ ಎಂಬ ಸಣ್ಣತನ. ಅವನ ಅಂಗಡಿಯಲ...
-
ಸಣ್ಣವನಿದ್ದಾಗ ನನ್ನೂರಿಗೊಬ್ಬ 'ಕಲಾಯಿಸಾಬಿ' ಬರುತ್ತಿದ್ದ. ಒಮ್ಮೆ ಬಂದರೆ ವರ್ಷಗಟ್ಟಲೆ 'ಪೀರಲಸ್ವಾಮಿ'ಗುಡಿಯಲ್ಲೇ ಉಳಿಯುತ್ತಿತ್ತು ಅವನ ಕುಟುಂಬ. ಅವ...
-
ಬ ದಲಾವಣೆ..ಕಾಲದ ಗುಣ! ಪ್ರತೀಕ್ಷಣವೂ ನಮ್ಮ ದೇಹವು ಬದಲಾದಂತೆ,ಮಾಗಿದಂತೆ ನಮ್ಮ ದೇಶವೂ ಬದಲಾಗುತ್ತಿರುತ್ತದೆ..ಮಾಗುತ್ತಿರುತ್ತದೆ. ಬದಲಾವಣೆಗೆ ಸಮಾಜವೊಂದು ಒಡ್ಡಿಕೊಂಡ ...
-
ಉತ್ತರಕರ್ನಾಟಕದ ಹಳ್ಳಿಗಳಲ್ಲಿ ಆಚರಿಸಲ್ಪಡುವ ಹಬ್ಬಗಳ ಸೊಬಗೇ ವಿಸ್ಮಯಗೊಳಿಸುವಂಥದು! ಇಲ್ಲಿನ ಎಲ್ಲ ಬದುಕುಗಳ ಪ್ರತೀ ಕದಲಿಕೆಯೂ ಮಣ್ಣಿನ ಜೊತೆಗೊಂದು ಸಂಕೀರ್ಣವಾದ ಬಂಧ...
No comments:
Post a Comment